ಸರ್ಪ ಶಾಪ ಎಂದರೇನು ಮತ್ತು ಅದರಿಂದ ಹೇಗೆ ಮುಕ್ತಿ ಪಡೆಯಬಹುದು ಎಂಬುದರ ಕುರಿತು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ. ಸರ್ಪ ಶಾಪ ಮತ್ತು ಸರ್ಪ ದೋಷದ ನಡುವೆ ವ್ಯತ್ಯಾಸವಿದೆ ಎಂದು ಅವರು ಹೇಳಿದ್ದು, ಸರ್ಪ ಶಾಪ ವಂಶಪಾರಂಪರ್ಯವಾಗಿ ಬರುವ ಒಂದು ಅಗೋಚರ ಶಾಪವಾಗಿದೆ ಎಂದಿದ್ದಾರೆ. ಜಾತಕದಲ್ಲಿ ಲಗ್ನದಿಂದ ನವಮದಲ್ಲಿ ರಾಹು ಮತ್ತು ಮಂಗಳನ ದೃಷ್ಟಿ ಇರುವುದು ಸರ್ಪ ಶಾಪದ ಸೂಚನೆಯಾಗಿದೆ. ಈ ಶಾಪದಿಂದ ಸಂತಾನ ಸಮಸ್ಯೆಗಳು, ಮಾನಸಿಕ ಯಾತನೆ ಮತ್ತು ಕುಟುಂಬದಲ್ಲಿ ಅಶಾಂತಿ ಉಂಟಾಗಬಹುದು. ಪರಿಹಾರವಾಗಿ ನವಗ್ರಹ ಪ್ರತಿಷ್ಠಾಪನೆ, ಶಿವನಿಗೆ 108 ದಿನಗಳ ಅಭಿಷೇಕ, ನಾಗ ಪ್ರತಿಷ್ಠೆ, ಅಥವಾ ಅಂಗವಿಕಲರಿಗೆ ಸಹಾಯ ಮಾಡುವುದನ್ನು ಸೂಚಿಸಲಾಗಿದೆ. ಇವುಗಳ ಜೊತೆಗೆ, ಅನಾಥರಿಗೆ ಸೇವೆ ಸಲ್ಲಿಸುವುದರಿಂದಲೂ ಪರಿಹಾರ ಸಿಗಬಹುದು. ಎಲ್ಲವೂ ನಂಬಿಕೆಯ ಮೇಲೆ ಅವಲಂಬಿತವಾಗಿದೆ ಎಂದು ಗುರೂಜಿ ಹೇಳಿದ್ದಾರೆ.  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Live :- ವಿವಾಹ ಸಮಾರಂಭ, ಕಂಬಳ, ಜಾತ್ರೋತ್ಸವ, ನಾಟಕ, ಕ್ರೀಡೆ, ಯಕ್ಷಗಾನ, ಶಾಲಾ ಕಾಲೇಜುಗಳ ಕಾರ್ಯಕ್ರಮ, ಸಭಾ ಕಾರ್ಯಕ್ರಮ,ರಾಜಕೀಯ ಕಾರ್ಯಕ್ರಮ, ಹಾಗು ಇನ್ನಿತರ ಯಾವುದೇ ಶುಭಸಮಾರಂಭಗಳ ನೇರಪ್ರಸಾರಗಾಗಿ ಸಂಪರ್ಕಿಸಿ : 9483578321..

ಸಾಧನೆಗೆ ಮನಸ್ಸು-ಗುರಿ-ಪ್ರಯತ್ನ ಮುಖ್ಯ ಸುನೀಲ್ ಪಂಡಿತ್

 

ಸಾಧನೆಗೆ ಮನಸ್ಸು-ಗುರಿ-ಪ್ರಯತ್ನ  ಮುಖ್ಯ
ಸುನೀಲ್ ಪಂಡಿತ್  - webnews kannada

By Webnewskannada

ಸಾಧನೆಗೆ ಮನಸ್ಸು-ಗುರಿ-ಪ್ರಯತ್ನ  ಮುಖ್ಯ  ಸುನೀಲ್ ಪಂಡಿತ್

 

ಉಜಿರೆ :  ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ದೂರದರ್ಶಿತ್ವದ  ಈ ರುಡ್ ಸೆಟ್ ಸಂಸ್ಥೆಯ ಮೂಲಕ ನಿರುದ್ಯೋಗ ನಿವರಾಣೆಗೆ ಮಹತ್ವ ಮೈಲುಗಲ್ಲು ಆಗಿದೆ. ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಹೆಚ್ಚಿನ ಮಹತ್ವ ಇದೆ ಈ ಹಿನ್ನಲೆಯಲ್ಲಿ  ವೃತ್ತಿಗೆ ಸಂಬಂಧಿಸಿದ ತರಬೇತಿಯನ್ನು ಪಡೆಯುವುದು ಮಾತ್ರವಲ್ಲ  



ಆ ವೃತ್ತಿಯಲ್ಲಿ ಶ್ರದ್ಧೆ –ಬದ್ಧತೆ ಇರಬೇಕು ಆವಾಗ  ಅದು ನಮ್ಮ ಕೈ ಹಿಡಿಯುತ್ತದೆ. ಜೊತೆಗೆ ದುರಭ್ಯಾಸಗಳಿಂದ ದೂರ ಇರಬೇಕು ಯಾಕೆಂದರೆ ಕೆಲವೊಮ್ಮೆ ಸಂಪಾದನೆಯ ಹೆಚ್ಚಿನ ಭಾಗ ದುರಭ್ಯಾಸ ಹಾಳು ಮಾಡುತ್ತದೆ. ಜೀವನ ಅನ್ನುವುದು ಸುಲಭವಲ್ಲ  ಪ್ರತಿ ಕ್ಷಣವು ದುಡಿಯಬೇಕಾಗುತ್ತದೆ.  ತೀರ ಕಷ್ಟದ ಸಮಯದಲ್ಲಿ ಸಕರಾತ್ಮಕವಾದ ಯೋಚನೆ ಮಾಡಿದರೆ ಯಾವುದೇ ಕಷ್ಟವನ್ನು ಎದುರಿಸಿ ಬೆಳೆಯಬಹುದು. ಸಣ್ಣ ಸಣ್ಣ ಯೋಜನೆಗಳನ್ನು ಹಾಕಿಕೊಂಡು ಅದನ್ನು ಸಾಧಿಸಿ, ಇದರ ಮೂಲಕ ಹೆಚ್ಚಿನ 



ಸಾಧನೆ ಮಾಡಬಹುದು. ಸಾಧನೆಗೆ ಮುಖ್ಯವಾಗಿ ಮನಸ್ಸು-ಗುರಿ-ಪ್ರಯತ್ನ ಮುಖ್ಯ. ಶ್ರದ್ಧೆ-ಆತ್ಮವಿಶ್ವಾಸ-ಸಕರಾತ್ಮಕ ಮಾನೋಭಾವದ ಜೊತೆಗೆ ದುರಭ್ಯಾಸಗಳಿಂದ ದೂರ  ಇದ್ದು ಸಂಸ್ಥೆಯಲ್ಲಿ ಹೇಳಿ ಕೊಟ್ಟ  ಎಲ್ಲಾ ವಿಚಾರಗಳನ್ನು ಅಳವಡಿಸಿಕೊಂಡು ಯಶಸ್ವಿ ಉದ್ಯಮಿಗಳಾಗಿ ಬೆಳೆಯಿರಿ ಎಂದು *ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿಯುತ ಪದವಿ ಪೂರ್ವ ಕಾಲೇಜಿನ ಪ್ರಾಶುಂಪಾಲರಾದ ಶ್ರೀಯುತ ಸುನೀಲ್ ಪಂಡಿತ್* ಅಭಿಪ್ರಾಯಪಟ್ಟರು.

ಅವರು ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ *ಟಿ.ವಿ. ಟೆಕ್ನಿಷಿಯನ್* ತರಬೇತಿಯ  ಸಮಾರೋಪ ಸಮಾರಂಭದಲ್ಲಿ  ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ  ವಿತರಿಸಿ ಮಾತನಾಡಿದರು. ಮೌಲ್ಯ ಮತ್ತು ಕೌಶಲ್ಯವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು  ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ *ಶ್ರೀ ಬಿ.ಪಿ.ವಿಜಯ ಕುಮಾರ್* ವಹಿಸಿ, ಮಾತನಾಡಿ ಡಿಜಿಟಲ್ ಕ್ಷೇತ್ರದಲ್ಲಿ ಇರುವ ವಿವಿಧ ಅವಕಾಶಗಳನ್ನು ಬಳಸಿಕೊಳ್ಳಿ ಸ್ವ ಉದ್ಯೋಗಕ್ಕೆ ಬೇಕಾದ ಸಾಲ ಸೌಲಭ್ಯಗಳಿಗೆ ಯೋಜನಾ ವರದಿಯನ್ನು ತಯಾರಿಸಿಕೊಂಡು  ಬ್ಯಾಂಕ್ಗಳನ್ನು ಸಂಪರ್ಕ ಮಾಡಿ ಎಂದು ತಿಳಿಸಿದರು.


ರುಡ್ ಸೆಟ್ ಸಂಸ್ಥೆಯ *ನಿರ್ದೇಶಕರಾದ ಶ್ರೀ ಅಜೇಯ* ಅವರು ಅತಿಥಿಗಳನ್ನು ಸ್ವಾಗತಿಸಿದರು.ಸಂಸ್ಥೆಯ ಹಿರಿಯ ಉಪನ್ಯಾಸಕರಾದ  *ಕೆ.ಕರುಣಾಕರ ಜೈನ್* ಕಾರ್ಯಕ್ರಮ ನಿರೂಪಿಸಿದರು ಸಂಸ್ಥೆಯ ಹಿರಿಯ ಉಪನ್ಯಾಸಕರಾದ *ಅಬ್ರಹಾಂ ಜೇಮ್ಸ್*  ವಂದಿಸಿದರು. ರಂಜಿತ್, ವಿನೋದ ಕುಮಾರ್ ತರಬೇತಿಯ ಅನುಭವ ಹಂಚಿಕೊಂಡರು.

ಹುಲಿ

Kalyanpur Cement Kalyanpur Cement Kalyanpur Cement Kalyanpur Cement Kalyanpur Cement  





Next Post Previous Post
No Comment
Add Comment
comment url