ಸರ್ಪ ಶಾಪ ಎಂದರೇನು ಮತ್ತು ಅದರಿಂದ ಹೇಗೆ ಮುಕ್ತಿ ಪಡೆಯಬಹುದು ಎಂಬುದರ ಕುರಿತು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ. ಸರ್ಪ ಶಾಪ ಮತ್ತು ಸರ್ಪ ದೋಷದ ನಡುವೆ ವ್ಯತ್ಯಾಸವಿದೆ ಎಂದು ಅವರು ಹೇಳಿದ್ದು, ಸರ್ಪ ಶಾಪ ವಂಶಪಾರಂಪರ್ಯವಾಗಿ ಬರುವ ಒಂದು ಅಗೋಚರ ಶಾಪವಾಗಿದೆ ಎಂದಿದ್ದಾರೆ. ಜಾತಕದಲ್ಲಿ ಲಗ್ನದಿಂದ ನವಮದಲ್ಲಿ ರಾಹು ಮತ್ತು ಮಂಗಳನ ದೃಷ್ಟಿ ಇರುವುದು ಸರ್ಪ ಶಾಪದ ಸೂಚನೆಯಾಗಿದೆ. ಈ ಶಾಪದಿಂದ ಸಂತಾನ ಸಮಸ್ಯೆಗಳು, ಮಾನಸಿಕ ಯಾತನೆ ಮತ್ತು ಕುಟುಂಬದಲ್ಲಿ ಅಶಾಂತಿ ಉಂಟಾಗಬಹುದು. ಪರಿಹಾರವಾಗಿ ನವಗ್ರಹ ಪ್ರತಿಷ್ಠಾಪನೆ, ಶಿವನಿಗೆ 108 ದಿನಗಳ ಅಭಿಷೇಕ, ನಾಗ ಪ್ರತಿಷ್ಠೆ, ಅಥವಾ ಅಂಗವಿಕಲರಿಗೆ ಸಹಾಯ ಮಾಡುವುದನ್ನು ಸೂಚಿಸಲಾಗಿದೆ. ಇವುಗಳ ಜೊತೆಗೆ, ಅನಾಥರಿಗೆ ಸೇವೆ ಸಲ್ಲಿಸುವುದರಿಂದಲೂ ಪರಿಹಾರ ಸಿಗಬಹುದು. ಎಲ್ಲವೂ ನಂಬಿಕೆಯ ಮೇಲೆ ಅವಲಂಬಿತವಾಗಿದೆ ಎಂದು ಗುರೂಜಿ ಹೇಳಿದ್ದಾರೆ.  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Live :- ವಿವಾಹ ಸಮಾರಂಭ, ಕಂಬಳ, ಜಾತ್ರೋತ್ಸವ, ನಾಟಕ, ಕ್ರೀಡೆ, ಯಕ್ಷಗಾನ, ಶಾಲಾ ಕಾಲೇಜುಗಳ ಕಾರ್ಯಕ್ರಮ, ಸಭಾ ಕಾರ್ಯಕ್ರಮ,ರಾಜಕೀಯ ಕಾರ್ಯಕ್ರಮ, ಹಾಗು ಇನ್ನಿತರ ಯಾವುದೇ ಶುಭಸಮಾರಂಭಗಳ ನೇರಪ್ರಸಾರಗಾಗಿ ಸಂಪರ್ಕಿಸಿ : 9483578321..

ಅಭ್ಯುದಯ 2025 :ಎಸ್ ಎಮ್ ಎಸ್ ಕಾಲೇಜು, ಬ್ರಹ್ಮಾವರಕ್ಕೆ ಸಮಗ್ರ ಚಾಂಪಿಯನ್‌ಷಿಪ್ ಪ್ರಶಸ್ತಿ

 ಅಭ್ಯುದಯ 2025 :ಎಸ್ ಎಮ್ ಎಸ್ ಕಾಲೇಜು, ಬ್ರಹ್ಮಾವರಕ್ಕೆ ಸಮಗ್ರ ಚಾಂಪಿಯನ್‌ಷಿಪ್ ಪ್ರಶಸ್ತಿ

ಅಭ್ಯುದಯ 2025 :ಎಸ್ ಎಮ್ ಎಸ್ ಕಾಲೇಜು, ಬ್ರಹ್ಮಾವರಕ್ಕೆ ಸಮಗ್ರ ಚಾಂಪಿಯನ್‌ಷಿಪ್ ಪ್ರಶಸ್ತಿ

 ಉಡುಪಿ ಜಿಲ್ಲೆಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು ಇವರಿಂದ ಆಯೋಜಿಸಲಾದ “ಅಭ್ಯುದಯ 2025” ಅಂತರ ಕಾಲೇಜು ಸಮಾಜಕಾರ್ಯ ಸ್ಪರ್ಧೆಯಲ್ಲಿ ಎಸ್ ಎಮ್ ಎಸ್  ಕಾಲೇಜಿನ ವಿದ್ಯಾರ್ಥಿಗಳು  ತಮ್ಮ ಪ್ರತಿಭೆ, ಶ್ರಮ ಮತ್ತು ತಂಡಭಾವವನ್ನು ಪ್ರದರ್ಶಿಸಿ, ಕೊಲಾಜ್ ತಯಾರಿಕೆ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ, ಪೋಸ್ಟರ್ ತಯಾರಿಕೆಯಲ್ಲಿ ದ್ವಿತೀಯ ಸ್ಥಾನ, ಮತ್ತು ಕ್ವಿಜ್ ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಉಳಿದ ಎಲ್ಲಾ ಸ್ಪರ್ಧೆಯಲ್ಲಿ ಅತ್ಯುತಮ ಭಾಗವಹಿಸುವಿಕೆ   ಮೂಲಕ ಕಾಲೇಜು ಒಟ್ಟು ಚಾಂಪಿಯನ್‌ಷಿಪ್ ಪ್ರಶಸ್ತಿಯನ್ನು ಮುಡಿಗೆರಿಸಿಕೊಂಡಿದೆ.

Next Post Previous Post
No Comment
Add Comment
comment url